
ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡದಿದ್ದರೂ ಸುಳ್ಳು ಫೋಟೋಗಳನ್ನು ಅಪ್ಲೋಡ್ ಮಾಡಿ ವಂಚಿಸುತ್ತಿರುವ ಆರೋಪದ ಬಗ್ಗೆ ಸಚಿವ ಈಶ್ವರ್ ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ.
ಚಾಮರಾಜನಗರದ ಮಾದಾಪುರ ಗ್ರಾಮ ಪಂಚಾಯತಿಯಲ್ಲಿ 382 ರೂ. ಕೂಲಿ ಬದಲಾಗಿ 100 ರೂ. ನೀಡುತ್ತಿರುವ ವಿಡಿಯೋ ವೈರಲ್ ಆದ ಹಿನ್ನೆಲೆಯಲ್ಲಿ 48 ಗಂಟೆಯೊಳಗೆ ವರದಿ ನೀಡಲು ಸೂಚಿಸಲಾಗಿದೆ.
ತೆಲಂಗಾಣದ ಜಹೀರಾಬಾದ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೀದರ್ ಜಿಲ್ಲೆಯ ಐವರು ಮೃತಪಟ್ಟಿದ್ದು, ಗಾಯಾಳುಗಳ ಚಿಕಿತ್ಸಾ ವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಸಚಿವರು ನಿರ್ದೇಶನ ನೀಡಿದ್ದಾರೆ.