
ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಸೇರಿದಂತೆ ರಾಜ್ಯದ ಹಲವು ವಿವಿಗಳಲ್ಲಿ ಸ್ನಾತಕೋತ್ತರ ಕೋರ್ಸ್ಗಳಿಗೆ ವಿದ್ಯಾರ್ಥಿಗಳ ಕೊರತೆ ಉಂಟಾಗಿದ್ದು, 150ಕ್ಕಿಂತ ಕಡಿಮೆ ಅರ್ಜಿಗಳು ಬಂದಿವೆ.
ಸರ್ಕಾರಿ ಹುದ್ದೆಗಳ ಭರ್ತಿ ಪ್ರಕ್ರಿಯೆ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳು ಪಿಜಿ ಮಾಡುವ ಬದಲು ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರಗಳತ್ತ ಮುಖ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳನ್ನು ಸೆಳೆಯಲು ಪ್ರಾಧ್ಯಾಪಕರು ಪದವಿ ಕಾಲೇಜುಗಳಿಗೆ ಭೇಟಿ ನೀಡಿ ಮನವೊಲಿಸುವ ಪ್ರಯತ್ನ ಮಾಡುತ್ತಿದ್ದು, ವಿವಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ ಆರಂಭಿಸುವ ಚರ್ಚೆ ನಡೆಯುತ್ತಿದೆ.