
ಲಂಡನ್ಗೆ ತೆರಳುತ್ತಿದ್ದ ವರ್ಜಿನ್ ಅಟ್ಲಾಂಟಿಕ್ ವಿಮಾನವು ತಾಂತ್ರಿಕ ದೋಷದಿಂದಾಗಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.
ಬೆಳಗ್ಗೆ 8:20ಕ್ಕೆ ಟೇಕಾಫ್ ಆಗಿದ್ದ ವಿಮಾನದಲ್ಲಿ 270 ಪ್ರಯಾಣಿಕರಿದ್ದರು ಮತ್ತು ಸುರಕ್ಷತೆಯ ದೃಷ್ಟಿಯಿಂದ ವಿಮಾನವು ತುಮಕೂರು ಸುತ್ತಮುತ್ತ ಅರ್ಧ ಗಂಟೆಗೂ ಹೆಚ್ಚು ಕಾಲ ಹಾರಾಟ ನಡೆಸಿತು.
ತುರ್ತು ಭೂಸ್ಪರ್ಶದ ನಂತರ ವಿಮಾನದಲ್ಲಿದ್ದ ಎಲ್ಲಾ 270 ಪ್ರಯಾಣಿಕರು ಸುರಕ್ಷಿತವಾಗಿದ್ದು, ಅವರಿಗೆ ಅಗತ್ಯವಿರುವ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.