
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ (PoK) ನಾಗರಿಕರ ಮೇಲೆ ನಡೆಯುತ್ತಿರುವ ದೌರ್ಜನ್ಯ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದ್ದು, ಪಾಕಿಸ್ತಾನವನ್ನು ಹೊಣೆಗಾರರನ್ನಾಗಿ ಮಾಡಲು ಆಗ್ರಹಿಸಿದೆ.
ಕಳೆದ 4 ದಿನಗಳಲ್ಲಿ ಪಾಕಿಸ್ತಾನಿ ಭದ್ರತಾ ಪಡೆಗಳ ದಾಳಿಯಿಂದ 40ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.
ಬೆಲೆ ಏರಿಕೆ ಮತ್ತು ರಾಜಕೀಯ ತಾರತಮ್ಯದ ವಿರುದ್ಧ ಪ್ರತಿಭಟಿಸುತ್ತಿರುವ ಜನರನ್ನು ಪಾಕಿಸ್ತಾನದ ರಕ್ಷಣಾ ಸಚಿವರು ಶತ್ರುಗಳು ಎಂದು ಕರೆದಿರುವುದು ಆ ದೇಶದ ನಿರ್ಲಕ್ಷ್ಯವನ್ನು ಎತ್ತಿ ತೋರಿಸಿದೆ ಎಂದು ರಣಧೀರ್ ಜೈಸ್ವಾಲ್ ಹೇಳಿದ್ದಾರೆ.