
ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡವು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಟಾಸ್ ಸೋತ ಭಾರತ ತಂಡವು ಮೊದಲು ಬ್ಯಾಟಿಂಗ್ ಮಾಡುತ್ತಿದೆ.
ಈ ಪಂದ್ಯಕ್ಕಾಗಿ ಭಾರತ ತಂಡದಲ್ಲಿ ಏಕೈಕ ಬದಲಾವಣೆ ಮಾಡಲಾಗಿದ್ದು, ವೇಗಿ ಅರ್ಷದೀಪ್ ಸಿಂಗ್ ಬದಲಿಗೆ ಯಶ್ ಠಾಕೂರ್ ಅವರನ್ನು ಆಡುವ ಹನ್ನೊಂದರ ಬಳಗದಲ್ಲಿ ಸೇರಿಸಿಕೊಳ್ಳಲಾಗಿದೆ.
ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಸಿಗದ ವೈಭವ್ ಸೂರ್ಯವಂಶಿಗೆ ಈ ಅಂತಿಮ ಪಂದ್ಯದಲ್ಲೂ ಆಡುವ ಅವಕಾಶ ಸಿಕ್ಕಿಲ್ಲ.