
ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ ಮನೆಮಾಡಿದ್ದು, ಸೆಪ್ಟೆಂಬರ್ 4ರ ಮಧ್ಯರಾತ್ರಿ 12.12ಕ್ಕೆ ಕೃಷ್ಣನಿಗೆ ಅರ್ಘ್ಯ ಪ್ರದಾನ ಮತ್ತು ಸೆಪ್ಟೆಂಬರ್ 5ರಂದು ವಿಟ್ಲಪಿಂಡಿ ಲೀಲೋತ್ಸವ ನಡೆಯಲಿದೆ.
ಈ ಬಾರಿಯ ಉತ್ಸವದಲ್ಲಿ ಮೊದಲ ಬಾರಿಗೆ ಸಾಂಪ್ರದಾಯಿಕ ಮಲ್ಲಯುದ್ಧ ಪ್ರದರ್ಶನವನ್ನು ಆಯೋಜಿಸಲಾಗಿದ್ದು, ಮೈಸೂರು, ಮಂಡ್ಯ ಮತ್ತು ಮಂಗಳೂರಿನ ಪೈಲ್ವಾನ್ರು ಭಾಗವಹಿಸಲಿದ್ದಾರೆ.
ಉತ್ಸವದ ಭದ್ರತೆಗಾಗಿ 3 ಡ್ರೋನ್ಗಳು, 45 ಸಿಸಿಟಿವಿ ಕ್ಯಾಮೆರಾಗಳು ಮತ್ತು ಫಿಂಗರ್ಪ್ರಿಂಟ್ ಸ್ಕ್ಯಾನರ್ಗಳನ್ನು ಬಳಸಲಾಗುತ್ತಿದ್ದು, ಎಸ್ಪಿ ಹರಿರಾಮ್ ಶಂಕರ್ ನೇತೃತ್ವದಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.