
ವೃದ್ಧಾಪ್ಯ ಮತ್ತು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ವಿದೇಶಗಳ ಮಾದರಿಯಲ್ಲಿ ಭಾರತದಲ್ಲೂ ಸರ್ಕಾರಗಳು ಸಹಾಯಧನ ನೀಡುವ ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಸದ್ಗುರು ಮಧುಸೂದನ ಸಾಯಿ ಆಗ್ರಹಿಸಿದರು.
ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಮೆರಿಕ ಮತ್ತು ಯುರೋಪಿನ ದೇಶಗಳಲ್ಲಿ ಇಂತಹ ರೋಗಿಗಳಿಗೆ ತಿಂಗಳಿಗೆ 5,000 ಡಾಲರ್ ಸಹಾಯಧನ ನೀಡುವ ವ್ಯವಸ್ಥೆಯಿದೆ ಎಂದು ಉದಾಹರಿಸಿದರು.
ಮೈಸೂರಿನಲ್ಲಿ 2019ರಿಂದ ಕಾರ್ಯನಿರ್ವಹಿಸುತ್ತಿರುವ ಶ್ರೀ ಸತ್ಯಸಾಯಿ ಅನಂತನಿಕೇತನಂ ಗುರುಕುಲವು 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತಿದ್ದು, ಪ್ರಸಕ್ತ ಸಾಲಿನಲ್ಲಿ 40 ಮಕ್ಕಳು ದಾಖಲಾಗಿದ್ದಾರೆ.