
ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಲ್ಲಿ ತುಮಕೂರು ಮೂಲದ ಇಬ್ಬರು ಸೇರಿದಂತೆ ಒಟ್ಟು 275 ಭಾರತೀಯರು ನಾಪತ್ತೆಯಾಗಿದ್ದು, ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದೆ.
ಕರ್ನಾಟಕದಿಂದ ಪ್ರವಾಸಕ್ಕೆ ತೆರಳಿದ್ದ 67 ಕನ್ನಡಿಗರ ತಂಡ ನಾಪತ್ತೆಯಾಗಿದ್ದು, ಅದರಲ್ಲಿ 28 ಮಂದಿ ಬೆಂಗಳೂರಿನವರು ಸೇರಿದ್ದಾರೆ ಎಂದು ವರದಿಯಾಗಿದೆ.
ನಾಪತ್ತೆಯಾದವರ ರಕ್ಷಣೆಗಾಗಿ ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಅಭಿಜಿತ್ ಗೌಡ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದ್ದು, ಎಂಇಎ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರೆ.