
ಸಕ್ಕರೆ ಬೆಲೆ ಏರಿಕೆಯ ಹಿನ್ನೆಲೆಯಲ್ಲಿ, ಸ್ಥಳೀಯ ಬೆಲ್ಲದ ಘಟಕಗಳು ಮತ್ತು ಧಾನ್ಯ-ಆಧಾರಿತ ಘಟಕಗಳಿಗೂ ಎಥೆನಾಲ್ ಉತ್ಪಾದಿಸಲು ಸರ್ಕಾರ ಅನುಮತಿ ನೀಡಬೇಕೆಂದು ಕಬ್ಬು ಬೆಳೆಗಾರರು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ವಾರ್ಷಿಕ 600 ಲಕ್ಷ ಟನ್ ಕಬ್ಬು ಉತ್ಪಾದನೆಯಾಗುತ್ತಿದ್ದು, ಕೇವಲ 30 ರಿಂದ 40 ಲಕ್ಷ ಟನ್ ಮಾತ್ರ ಬೆಲ್ಲ ಉತ್ಪಾದನೆಗೆ ಬಳಕೆಯಾಗುತ್ತಿದೆ ಎಂದು ರೈತ ಸಂಘದ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ರೈತರಿಗೆ ನೇರ ಮಾರಾಟಕ್ಕೆ ಮಾರುಕಟ್ಟೆ ಹಾಗೂ ಅಗತ್ಯ ಅನುಮತಿಗಳು ಸಿಕ್ಕರೆ ಸಕ್ಕರೆ ಕಾರ್ಖಾನೆಗಳ ಮೇಲಿನ ಅವಲಂಬನೆ ತಗ್ಗಿ ರೈತರ ಆದಾಯ ಹೆಚ್ಚಾಗಲಿದೆ ಎಂದು ಅಭಿಪ್ರಾಯಪಡಲಾಗಿದೆ.