
ರಾಜ್ಯದಲ್ಲಿ ಬರ ಪರಿಸ್ಥಿತಿ ಇರುವುದರಿಂದ ತಮಿಳುನಾಡಿಗೆ 3,500 ಕ್ಯುಸೆಕ್ ಕಾವೇರಿ ನೀರು ಹರಿಸುವ ಆದೇಶ ಸರಿಯಲ್ಲ ಎಂದು ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ವಿರೋಧ ವ್ಯಕ್ತಪಡಿಸಿದ್ದಾರೆ.
ಬರಪೀಡಿತ ಪ್ರದೇಶಗಳನ್ನು ಘೋಷಿಸಲು ಕೇಂದ್ರದ ಮಾನದಂಡಗಳನ್ನು ಸಡಿಲಗೊಳಿಸುವಂತೆ ಕೋರಲಾಗಿದ್ದು, ಆಗಸ್ಟ್ ಅಂತ್ಯದವರೆಗೆ ಮಳೆ ಪರಿಸ್ಥಿತಿ ಅವಲೋಕಿಸಿ ವರದಿ ಸಲ್ಲಿಸಲಾಗುವುದು.
ಮೇಕೆದಾಟು ಯೋಜನೆಗೆ ತಮಿಳುನಾಡಿನ ಸಮ್ಮತಿಯ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದ್ದು, ಈ ವಿಚಾರದಲ್ಲಿ ಕರ್ನಾಟಕಕ್ಕೆ ಕಾನೂನುಬದ್ಧ ಹಕ್ಕು ಇದೆ ಎಂದು ಡಿಸಿಎಂ ಸ್ಪಷ್ಟಪಡಿಸಿದ್ದಾರೆ.