
ಚಾಮರಾಜನಗರದ ಹನೂರು ಅರಣ್ಯ ಪ್ರದೇಶದಲ್ಲಿ ನಡೆದ ಮೂವರ ಸಾವಿನ ಶೂಟೌಟ್ ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ತನಿಖೆ ಆರಂಭಿಸಿದೆ.
ಆಯೋಗದ ಡಿವೈಎಸ್ಪಿ ಅಶ್ವತ್ಥನಾರಾಯಣ ನೇತೃತ್ವದ ತಂಡ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿಯಿಂದ ಮಾಹಿತಿ ಕಲೆ ಹಾಕುತ್ತಿದೆ.
ಘಟನೆಯಲ್ಲಿ ಬದುಕುಳಿದಿರುವ ನಾಲ್ಕನೇ ವ್ಯಕ್ತಿ ಅಜ್ಞಾತ ಸ್ಥಳದಿಂದ ವಿಡಿಯೋ ಸಂದೇಶ ಬಿಡುಗಡೆ ಮಾಡಿದ್ದು, ತನಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದಾನೆ.