
ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗಣಪತಿ ಕಟ್ಟೆ ಬಳಿ ಕಾರೊಂದು ಸೋಮಾವತಿ ನದಿಗೆ ಬಿದ್ದಿದ್ದು, ಬೆಂಗಳೂರು ಮೂಲದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ನದಿಯಲ್ಲಿ ಹರಿಯುತ್ತಿದ್ದ ನೀರಿನಲ್ಲಿ ಕಾರಿಗೆ ಬಂಡೆಯೊಂದು ಅಡ್ಡ ಸಿಕ್ಕಿದ್ದರಿಂದ ಕಾರು ಕೊಚ್ಚಿ ಹೋಗುವುದು ತಪ್ಪಿದ್ದು, ಸ್ಥಳೀಯರು ಹಗ್ಗ ಬಳಸಿ ದಂಪತಿಯನ್ನು ರಕ್ಷಿಸಿದ್ದಾರೆ.
ನದಿಗೆ ತಡೆಗೋಡೆ ಇಲ್ಲದಿರುವುದರಿಂದ ಈ ದುರ್ಘಟನೆ ಸಂಭವಿಸಿದ್ದು, ಈ ಹಿಂದೆ ಇದೇ ಸ್ಥಳದಲ್ಲಿ ಮೂರ್ನಾಲ್ಕು ಅಪಘಾತಗಳು ನಡೆದಿವೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.