
ಕೇಂದ್ರ ಸರ್ಕಾರ ತೈಲ ಬೆಲೆ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ, ಸಾರಿಗೆ ನಿಗಮಗಳ ನಷ್ಟ ಸರಿದೂಗಿಸಲು ಬಸ್ ಟಿಕೆಟ್ ದರ ಪರಿಷ್ಕರಣೆಗೆ ಸರ್ಕಾರ ಚಿಂತನೆ ನಡೆಸಿದೆ.
ನಿವೃತ್ತ ಐಎಎಸ್ ಅಧಿಕಾರಿ ಅತುಲ್ ತಿವಾರಿ ನೇತೃತ್ವದ ಸಮಿತಿ ದರ ಪರಿಷ್ಕರಣೆ ಕುರಿತು ಅಧ್ಯಯನ ನಡೆಸುತ್ತಿದ್ದು, ಶೀಘ್ರವೇ ವರದಿ ಸಲ್ಲಿಸಲಿದೆ.
ಶಕ್ತಿ ಯೋಜನೆಯಡಿ ಒಂದು ಕೋಟಿ ಮಹಿಳೆಯರಿಗೆ 250 ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್ ಕಾರ್ಡ್ ವಿತರಣೆ ಮತ್ತು 4,500 ಎಲೆಕ್ಟ್ರಿಕ್ ಬಸ್ ಖರೀದಿಗೆ ಸರ್ಕಾರ ಅನುಮೋದನೆ ನೀಡಿದೆ.