
ಕೆಪಿಎಸ್ಸಿ ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ಬೆನ್ನಲ್ಲೇ, ಆರ್ಡಿಪಿಆರ್ ಇಂಜಿನಿಯರ್ಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಹೆಚ್ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.
ಸಚಿವ ಪ್ರಿಯಾಂಕ್ ಖರ್ಗೆ ಅವರ ಇಲಾಖೆಯಲ್ಲಿ ಮಂತ್ರಿಯ ಗಮನಕ್ಕೆ ಬಾರದೆ 24 ಜನರಿಗೆ ನೇಮಕಾತಿ ಆದೇಶ ನೀಡಿದ್ದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ.
2011ರ ಕೆಎಎಸ್ ಪರೀಕ್ಷೆಯ ಅಕ್ರಮದ ಬಗ್ಗೆ ಸಿಐಡಿ ತನಿಖಾ ವರದಿಯನ್ನು ಬಹಿರಂಗಪಡಿಸುವಂತೆ ಒತ್ತಾಯಿಸಿದ ಅವರು, ಪ್ರಕರಣವನ್ನು ಮುಚ್ಚಿಹಾಕದಂತೆ ಎಚ್ಚರಿಕೆ ನೀಡಿದ್ದಾರೆ.