
ಟಿ.ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದಂತೆ ಪೊಲೀಸ್ ಇನ್ಸ್ಪೆಕ್ಟರ್ ನೀಡಿದ ಎಚ್ಚರಿಕೆಯು ರಾಜಕೀಯ ವಿವಾದಕ್ಕೆ ಕಾರಣವಾಗಿದ್ದು, ಬಿಜೆಪಿ ನಾಯಕರು ಇನ್ಸ್ಪೆಕ್ಟರ್ ಅಮಾನತಿಗೆ ಆಗ್ರಹಿಸಿದ್ದಾರೆ.
ವಿಪಕ್ಷ ನಾಯಕ ಆರ್ ಅಶೋಕ್ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಟಿ. ನರಸೀಪುರಕ್ಕೆ ಭೇಟಿ ನೀಡಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗಣೇಶ ಕೇವಲ ಬಿಜೆಪಿ ಆಸ್ತಿಯಲ್ಲ, ಎಲ್ಲರ ಆಸ್ತಿ ಎಂದು ತಿರುಗೇಟು ನೀಡಿರುವ ಸಿಎಂ ಡಿಕೆ ಶಿವಕುಮಾರ್, ಅಶಾಂತಿ ಮೂಡಿಸಲು ದೊಡ್ಡ ಕುತಂತ್ರ ನಡೆಯುತ್ತಿದ್ದು ಪೊಲೀಸರಿಗೆ ಹುಷಾರಾಗಿರಲು ಹೇಳಿದ್ದೇವೆ ಎಂದಿದ್ದಾರೆ.