
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಖುದ್ದು ಹಾಜರಾಗಲು ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನಿರಾಕರಿಸಿದ್ದು, ಸೆಪ್ಟೆಂಬರ್ 16ಕ್ಕೆ ವಿಚಾರಣೆಯನ್ನು ಮುಂದೂಡಿದೆ.
ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರಿದ್ದ ಪೀಠವು ವಿಡಿಯೋ ಕಾನ್ಫರೆನ್ಸ್ ಮೂಲಕ ವಕೀಲರೊಂದಿಗೆ ಖಾಸಗಿಯಾಗಿ ಮಾತನಾಡಲು ಅಥವಾ ಪರಪ್ಪನ ಅಗ್ರಹಾರ ಜೈಲಿನಲ್ಲೇ ಕೋರ್ಟ್ ವ್ಯವಸ್ಥೆ ಕಲ್ಪಿಸುವ ಆಯ್ಕೆಗಳನ್ನು ನೀಡಿದೆ.
ದರ್ಶನ್ ಪರ ವಕೀಲ ಹಷ್ಮತ್ ಪಾಷಾ ಅವರು ವಿಡಿಯೋ ಕಾನ್ಫರೆನ್ಸ್ನಲ್ಲಿ ಗೌಪ್ಯತೆ ಇಲ್ಲವೆಂದು ವಾದಿಸಿದ್ದು, ನ್ಯಾಯಾಲಯವು ತಂತ್ರಜ್ಞಾನವನ್ನು ಬಳಸಿಕೊಂಡು ವಿಚಾರಣೆಯನ್ನು ಸುಗಮಗೊಳಿಸಲು ಸಲಹೆ ನೀಡಿದೆ.