
ನವದೆಹಲಿಯ ಟಿಕ್ರಿ ಕಲಾನ್ ಪ್ರದೇಶದಲ್ಲಿರುವ ಸಿಎನ್ಜಿ ಗ್ಯಾಸ್ ಪಂಪ್ನಲ್ಲಿ ಟ್ರಕ್ಗೆ ನೈಸರ್ಗಿಕ ಅನಿಲ ತುಂಬಿಸುತ್ತಿದ್ದ ವೇಳೆ ಸಂಭವಿಸಿದ ಭಾರಿ ಸ್ಫೋಟದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಆಗಸ್ಟ್ 19ರಂದು ಮಧ್ಯಾಹ್ನ 3.37ಕ್ಕೆ ಈ ದುರಂತ ಸಂಭವಿಸಿದ್ದು, ಮೃತರ ಪೈಕಿ ಒಬ್ಬರನ್ನು ಮನೀಶ್ ಎಂದು ಗುರುತಿಸಲಾಗಿದೆ ಮತ್ತು ಮೃತಪಟ್ಟ ಮೂವರೂ ಸಿಎನ್ಜಿ ಪಂಪ್ನಲ್ಲಿ ಕೆಲಸ ಮಾಡುತ್ತಿದ್ದ ಉದ್ಯೋಗಿಗಳಾಗಿದ್ದಾರೆ.
ಘಟನಾ ಸ್ಥಳಕ್ಕೆ ದೆಹಲಿ ಅಗ್ನಿಶಾಮಕ ದಳದ ಸಿಬ್ಬಂದಿ 6 ಅಗ್ನಿಶಾಮಕ ವಾಹನಗಳೊಂದಿಗೆ ಧಾವಿಸಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದು, ಟ್ರಕ್ನ ಗ್ಯಾಸ್ ಸಿಲಿಂಡರ್ ಸ್ಫೋಟಗೊಳ್ಳಲು ನಿಖರ ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.