
ಪಶ್ಚಿಮಘಟ್ಟದ 1,000ಕ್ಕೂ ಹೆಚ್ಚು ಗ್ರಾಮಗಳ ಮೇಲೆ ಪರಿಣಾಮ ಬೀರುವ ಕಸ್ತೂರಿ ರಂಗನ್ ವರದಿ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಈ ವರದಿಯು ಕರ್ನಾಟಕದ 10 ಜಿಲ್ಲೆಗಳ 39 ತಾಲೂಕುಗಳ 1,64,280 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯ ಎಂದು ಗುರುತಿಸಿದೆ.
ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರು ಕೇಂದ್ರಕ್ಕೆ ಆಕ್ಷೇಪಣೆ ಸಲ್ಲಿಸಲು ಇರುವ 60 ದಿನಗಳ ಕಾಲಾವಕಾಶದೊಳಗೆ ವರದಿ ತಿರಸ್ಕಾರಕ್ಕೆ ಶಿಫಾರಸು ಮಾಡುವುದಾಗಿ ಸದನದಲ್ಲಿ ಘೋಷಿಸಿದ್ದಾರೆ.