
ಶ್ರೀಲಂಕಾದ ಮಣ್ಣನ್ನು ಭಾರತ ವಿರೋಧಿ ಚಟುವಟಿಕೆಗಳಿಗೆ ಬಳಸಲು ಬಿಡುವುದಿಲ್ಲ ಎಂದು ಶ್ರೀಲಂಕಾ ಅಧ್ಯಕ್ಷ ಅನುರ ಕುಮಾರ ದಿಸ್ಸಾನಾಯಕೆ ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಭರವಸೆ ನೀಡಿದ್ದಾರೆ.
ಕಳೆದ 38 ವರ್ಷಗಳಲ್ಲಿ ಶ್ರೀಲಂಕಾಕ್ಕೆ ಭೇಟಿ ನೀಡಿದ ಮೊದಲ ಭಾರತೀಯ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್, ಉಭಯ ದೇಶಗಳ ನಡುವೆ ರಕ್ಷಣಾ ಸಹಕಾರಕ್ಕಾಗಿ 3 ಪ್ರಮುಖ ಒಪ್ಪಂದಗಳಿಗೆ ಸಹಿ ಹಾಕಿದ್ದಾರೆ.
ಭಾರತದ ಅನುದಾನದಡಿ ಶ್ರೀಲಂಕಾ ವಾಯುಪಡೆಯ 6 L70 ವಾಯು ರಕ್ಷಣಾ ಗನ್ಗಳನ್ನು ಆಧುನೀಕರಿಸಲು ಮತ್ತು 3 ಬೈಲಿ ಸೇತುವೆಗಳನ್ನು ಉದ್ಘಾಟಿಸಲು ಉಭಯ ನಾಯಕರು ನಿರ್ಧರಿಸಿದ್ದಾರೆ.