
ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗಗಳೆಂದು ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಆಗಸ್ಟ್ 14 ರಂದು ಸ್ಪಷ್ಟಪಡಿಸಿದ್ದಾರೆ.
ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ನಡೆಯುತ್ತಿರುವ ದೌರ್ಜನ್ಯ ಮತ್ತು ಭಯೋತ್ಪಾದನೆಯನ್ನು ಅಂತಾರಾಷ್ಟ್ರೀಯ ಸಮುದಾಯ ಗಮನಿಸಬೇಕೆಂದು ಭಾರತ ಆಗ್ರಹಿಸಿದೆ.
ನಾರ್ವೆಯ ವಿದೇಶಾಂಗ ಸಚಿವರ ಪಾಕಿಸ್ತಾನ ಭೇಟಿಯ ಸಂದರ್ಭದಲ್ಲಿ ಕಾಶ್ಮೀರದ ಕುರಿತು ನಡೆದ ಚರ್ಚೆಗಳಿಗೆ ಭಾರತ ಈ ಪ್ರತಿಕ್ರಿಯೆ ನೀಡಿದೆ.