
ಉಡುಪಿಯ ಮುದರಂಗಡಿ ಪೇಟೆಯಲ್ಲಿ ಶುಕ್ರವಾರ ಮಧ್ಯಾಹ್ನ ಬೈಕ್ನಲ್ಲಿ ಬಂದ ದುಷ್ಕರ್ಮಿಗಳು ಕಾಂಗ್ರೆಸ್ ಮುಖಂಡ ಹಾಗೂ ಉದ್ಯಮಿ ದೇವ ಡೆವಿಡ್ ಡಿಸೋಜಾ ಅವರ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ.
ಸಿಸಿ ಕ್ಯಾಮೆರಾದಲ್ಲಿ ಸೆರೆಯಾದ ದೃಶ್ಯದ ಪ್ರಕಾರ, ಇಬ್ಬರು ದುಷ್ಕರ್ಮಿಗಳ ಪೈಕಿ ಒಬ್ಬನು ನಡೆದುಕೊಂಡು ಬಂದು ಪಿಸ್ತೂಲ್ನಿಂದ ಮೂರ್ನಾಲ್ಕು ಬಾರಿ ಗುಂಡು ಹಾರಿಸಿ ಪರಾರಿಯಾಗಿದ್ದಾನೆ.
ಈ ಶೂಟೌಟ್ ಘಟನೆಯ ಬಗ್ಗೆ ಉಡುಪಿ ಎಸ್ಪಿ ತನಿಖೆ ನಡೆಸುತ್ತಿದ್ದು, ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ದಾಖಲಾಗಿವೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.