
ಹಾವೇರಿ ಜಿಲ್ಲೆಯ ಶಿಗ್ಗಾವಿಯ ಹನುಮಾನ್ ದೇವಸ್ಥಾನದಲ್ಲಿ ಅನ್ಯಕೋಮಿನ ವ್ಯಕ್ತಿಯೊಬ್ಬ ಪ್ರಜ್ಞಾಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿದ್ದು, ಈ ಹೇಯ ಕೃತ್ಯದ ವಿರುದ್ಧ ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಪಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕೆಂದು ಆಗ್ರಹಿಸಿರುವ ಬೊಮ್ಮಾಯಿ, ಈ ಸಂಬಂಧ ಕರೆದಿರುವ ಶಿಗ್ಗಾವಿ ಬಂದ್ಗೆ ಬೆಂಬಲ ಸೂಚಿಸಿದ್ದಾರೆ.
ಆಗಸ್ಟ್ 21ರಂದು ನಡೆದ ಈ ಘಟನೆಯು ಕೋಮು ಶಾಂತಿ ಕದಡುವ ಪ್ರಯತ್ನವಾಗಿದ್ದು, ಪೊಲೀಸರು ಪ್ರಕರಣವನ್ನು ತಿಳಿಗೊಳಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಬೊಮ್ಮಾಯಿ ಆರೋಪಿಸಿದ್ದಾರೆ.