
ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಆಗಸ್ಟ್ 14ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ನಿಂದ ಸಲೀಂ ಅಹ್ಮದ್ ಮತ್ತು ಬಿಜೆಪಿಯಿಂದ ಪಿ.ಹೆಚ್. ಪೂಜಾರ್ ಅವರು ಸಭಾಪತಿ ಸ್ಥಾನಕ್ಕೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದ್ದಾರೆ.
ಗೆಲ್ಲಲು ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ, ಚುನಾವಣೆಯ ಗಂಭೀರತೆ ಉಳಿಸಿಕೊಳ್ಳಲು ಬಿಜೆಪಿ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಿದ್ದು, ಉಪ ಸಭಾಪತಿ ಸ್ಥಾನಕ್ಕೂ ಅಭ್ಯರ್ಥಿಯನ್ನು ನಿಲ್ಲಿಸಲು ನಿರ್ಧರಿಸಿದೆ.