
ಉರ್ದು ಸೇರಿದಂತೆ 15 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯಲ್ಲಿ ಬಿಟ್ಟುಹೋಗಿರುವ ವಿಷಯಗಳ ಶಿಕ್ಷಕರನ್ನು ನೇಮಕ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ನೇಮಕಾತಿ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಗೆ ಕಳುಹಿಸಲಾಗಿದ್ದು, ಅನುಮತಿ ದೊರೆತ ಕೂಡಲೇ ಸಚಿವ ಸಂಪುಟದ ಒಪ್ಪಿಗೆ ಪಡೆದು ಅಧಿಸೂಚನೆ ಹೊರಡಿಸಲಾಗುವುದು.
ಸೋಮವಾರ ವಿಧಾನ ಮಂಡಲದಲ್ಲಿ 7,042.69 ಕೋಟಿ ರೂ. ಮೊತ್ತದ ಮೊದಲ ಕಂತಿನ ಪೂರಕ ಅಂದಾಜುಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅನುದಾನ ಮೀಸಲಿಡಲಾಗಿದೆ.