
ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲ್ಲೂಕಿನ ಘಂಟಂವಾರಪಲ್ಲಿ ಗ್ರಾಮದ ಬಾರ್ ಬಳಿ ಸೆಪ್ಟೆಂಬರ್ 5ರಂದು ನಾಗರಾಜ್ ಎಂಬ ವ್ಯಕ್ತಿಯನ್ನು ದುಷ್ಕರ್ಮಿಯೊಬ್ಬ ಡ್ರ್ಯಾಗರ್ನಿಂದ ಇರಿದು ಕೊಲೆ ಮಾಡಿದ್ದಾನೆ.
ಹೆಲ್ಮೆಟ್ ಧರಿಸಿದ್ದ ಆರೋಪಿಯು ನಾಗರಾಜ್ ಅವರ ಕುತ್ತಿಗೆ ಮತ್ತು ಕೆನ್ನೆಗೆ ಇರಿದಿದ್ದು, ತೀವ್ರ ರಕ್ತಸ್ರಾವದಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ಸಾಹು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ಹಳೆ ದ್ವೇಷ ಅಥವಾ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.