
ದೇಶಾದ್ಯಂತ ಗಣೇಶ ಚತುರ್ಥಿ ಹಬ್ಬವನ್ನು ಅತ್ಯಂತ ಸಡಗರದಿಂದ ಆಚರಿಸಲಾಗುತ್ತಿದ್ದು, ಚಿತ್ರರಂಗದ ಪ್ರಮುಖ ತಾರೆಯರು ತಮ್ಮ ಮನೆಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಿದ್ದಾರೆ.
ನಟಿ ರಶ್ಮಿಕಾ ಮಂದಣ್ಣ, ಧನಂಜಯ್, ಶಿಲ್ಪಾ ಶೆಟ್ಟಿ ಮತ್ತು ಹನ್ಸಿಕಾ ಮುಂತಾದ ಸೆಲೆಬ್ರಿಟಿಗಳು ತಮ್ಮ ಕುಟುಂಬದೊಂದಿಗೆ ಪೂಜೆ ಸಲ್ಲಿಸಿ ಹಬ್ಬದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ನಟ ಕಿರಣ್ ರಾಜ್ ಸಾಂಪ್ರದಾಯಿಕ ಉಡುಪಿನಲ್ಲಿ ಗಣೇಶ ಮೂರ್ತಿಯನ್ನು ವಾಹನದ ಮುಂದೆ ತರುತ್ತಿರುವ ಸುಂದರ ಕ್ಷಣಗಳು ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆದಿವೆ.