
ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ಹುಂಡಿಗೆ ಗುರುವಾರ ಬರೋಬ್ಬರಿ 6.93 ಕೋಟಿ ರೂಪಾಯಿ ದೇಣಿಗೆ ಸಂಗ್ರಹವಾಗಿದ್ದು, ಇದು ಇತಿಹಾಸದಲ್ಲೇ ಒಂದೇ ದಿನದಲ್ಲಿ ಸಂಗ್ರಹವಾದ 2ನೇ ಅತಿ ದೊಡ್ಡ ಮೊತ್ತವಾಗಿದೆ.
ಸಾಲು ಸಾಲು ರಜೆಗಳು ಮತ್ತು ವೀಕೆಂಡ್ ಹಿನ್ನೆಲೆಯಲ್ಲಿ ಭಕ್ತರ ದಟ್ಟಣೆ ವಿಪರೀತವಾಗಿ ಹೆಚ್ಚಾಗಿದ್ದು, ಸೆಪ್ಟೆಂಬರ್ 12ರಂದು ಒಟ್ಟು 81,724 ಭಕ್ತರು ದರ್ಶನ ಪಡೆದಿದ್ದಾರೆ.
ಬೆಂಗಳೂರಿನ ನಿವಾಸಿ ಗಿರಿಯಪ್ಪ ದಯಾನಂದ ಅವರು ಅನ್ನಪ್ರಸಾದ ಮತ್ತು ಪ್ರಾಣದಾನ ಟ್ರಸ್ಟ್ಗಳಿಗೆ ತಲಾ 50 ಲಕ್ಷ ರೂ.ಗಳಂತೆ ಒಟ್ಟು 1 ಕೋಟಿ ರೂಪಾಯಿ ದೇಣಿಗೆಯನ್ನು ನೀಡಿದ್ದಾರೆ.