
ಮಧ್ಯಪ್ರದೇಶದ ರಾಜ್ಗಢ ಜಿಲ್ಲೆಯ 20 ವರ್ಷದ ವಿದ್ಯಾರ್ಥಿ ಸುರೇಂದ್ರ ಸಿಂಗ್ ಚೌಧರಿ, ಏಕಾಂಗಿಯಾಗಿ ಕಸದಿಂದ ತುಂಬಿದ್ದ ಅಜ್ನರ್ ನದಿಯನ್ನು ಸ್ವಚ್ಛಗೊಳಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ.
2026ರ ಜನವರಿಯಿಂದ ಆರಂಭವಾದ ಈ ಸ್ವಚ್ಛತಾ ಅಭಿಯಾನದ ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಇಂಗ್ಲೆಂಡ್ನ ಮಾಜಿ ಕ್ರಿಕೆಟಿಗ ಕೇವಿನ್ ಪೀಟರ್ಸನ್ ಈತನ ಕಾರ್ಯವನ್ನು ಶ್ಲಾಘಿಸಿದ್ದಾರೆ.
ನದಿಯನ್ನು ಸ್ವಚ್ಛಗೊಳಿಸುವ ಪ್ರಕ್ರಿಯೆಯಲ್ಲಿ ಸೋಂಕಿಗೆ ತುತ್ತಾದರೂ ಧೃತಿಗೆಡದ ಸುರೇಂದ್ರ ಸಿಂಗ್, ತಿಂಗಳುಗಳ ಕಠಿಣ ಪರಿಶ್ರಮದಿಂದ ನದಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿದ್ದಾರೆ.