
ಕರ್ನಾಟಕದ 239 ತಾಲೂಕುಗಳ ಪೈಕಿ 122 ತಾಲೂಕುಗಳಲ್ಲಿ ಸತತ ಮೂರು ವಾರಗಳಿಂದ ಮಳೆಯಿಲ್ಲದೆ ಕೃಷಿ ಪರಿಸ್ಥಿತಿ ಗಂಭೀರವಾಗಿದೆ ಎಂದು ಕಂದಾಯ ಇಲಾಖೆ ತಿಳಿಸಿದೆ.
ಈ ವರ್ಷ ಕೇವಲ 36.5 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದ್ದು, ರಾಜ್ಯವು ಸುಮಾರು ಶೇ.50ರಷ್ಟು ಬೆಳೆ ನಷ್ಟವನ್ನು ಎದುರಿಸುವ ಸಾಧ್ಯತೆಯಿದೆ.
ಈಗಾಗಲೇ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಮುಂದಿನ ಒಂದು ವಾರದಲ್ಲಿ ಇನ್ನೂ 26 ತಾಲೂಕುಗಳು ಈ ಪಟ್ಟಿಗೆ ಸೇರುವ ನಿರೀಕ್ಷೆಯಿದೆ.