
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೆಟ್ಟದ ಮದಹಳ್ಳಿ ಗ್ರಾಮದಲ್ಲಿ ಒಂಟಿ ಕಾಡಾನೆಯೊಂದು ರೈತನ ಜಮೀನಿಗೆ ನುಗ್ಗಿ ಅಪಾರ ಪ್ರಮಾಣದ ಬೆಳೆ ನಾಶಪಡಿಸಿದೆ.
ಸೋಮವಾರ ಮುಂಜಾನೆ ಸುಮಾರು 4:30 ರ ವೇಳೆಗೆ ರೈತ ಮಂಜುನಾಥ್ ಎಂಬುವವರ ಕೃಷಿ ಜಮೀನಿಗೆ ಕಾಡಾನೆ ನುಗ್ಗಿದ್ದು, ಕಷ್ಟಪಟ್ಟು ಬೆಳೆಸಿದ್ದ ಬೆಳೆಯನ್ನು ತಿಂದು ತುಳಿದಿದೆ.
ಬಂಡೀಪುರ ಅರಣ್ಯ ಇಲಾಖೆ ಸಿಬ್ಬಂದಿಯ ನಿರ್ಲಕ್ಷ್ಯವೇ ಈ ಅನಾಹುತಕ್ಕೆ ಕಾರಣ ಎಂದು ಆರೋಪಿಸಿರುವ ಗ್ರಾಮಸ್ಥರು, ಕೂಡಲೇ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ.