
ನಾಳೆ ಗೌರಿ-ಗಣೇಶ ಹಬ್ಬವಿರುವ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆ.ಆರ್. ಮಾರುಕಟ್ಟೆಯಲ್ಲಿ ಹೂವು, ಹಣ್ಣು ಹಾಗೂ ಪೂಜಾ ಸಾಮಗ್ರಿಗಳ ಖರೀದಿ ಜೋರಾಗಿದೆ.
ನಸುಕಿನ 3 ಗಂಟೆಯಿಂದಲೇ ಮಾರುಕಟ್ಟೆ ಚಟುವಟಿಕೆಗಳು ಆರಂಭಗೊಂಡಿದ್ದು, ಹಬ್ಬ ಹಾಗೂ ಭಾನುವಾರ ಒಂದೇ ದಿನ ಬಂದಿರುವುದರಿಂದ ಜನಸಂದಣಿ ಹೆಚ್ಚಾಗಿದೆ.
ಮಾರುಕಟ್ಟೆ ಸುತ್ತಮುತ್ತ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ವಾಹನ ಸವಾರರು ಪರದಾಡುವಂತಾಗಿದೆ.