
ಬೆಂಗಳೂರು ದಕ್ಷಿಣದ ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ನಡೆಯಲಿರುವ ಬಿಗ್ ಬಾಸ್ ಕನ್ನಡ ಸೀಸನ್ 13ಕ್ಕೆ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಿದೆ.
ನಾಳೆ ಸಂಜೆ 7 ಗಂಟೆಗೆ ಆರಂಭವಾಗಲಿರುವ ಈ ರಿಯಾಲಿಟಿ ಶೋನಲ್ಲಿ ಸುಮಾರು 20 ಮಂದಿ ಸ್ಪರ್ಧಿಗಳು ಭಾಗವಹಿಸಲಿದ್ದು, ನಟ ಸುದೀಪ್ ನಿರೂಪಣೆ ಮುಂದುವರಿಸಲಿದ್ದಾರೆ.
ಕಳೆದ ಸೀಸನ್ನಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ನೊಟೀಸ್ನಿಂದ ಶೋ ಸ್ಥಗಿತಗೊಂಡಿದ್ದ ಹಿನ್ನೆಲೆಯಲ್ಲಿ, ಈ ಬಾರಿ ಆಯೋಜಕರು ಮುನ್ನೆಚ್ಚರಿಕೆಯಾಗಿ ಅಗತ್ಯ ಅನುಮತಿಗಳನ್ನು ಮೊದಲೇ ಪಡೆದುಕೊಂಡಿದ್ದಾರೆ.