
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೇಟ್ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಮೃತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ವೋಕ್ಸ್ವ್ಯಾಗನ್ ಮತ್ತು ಕಿಯಾ ಕಾರುಗಳ ನಡುವಿನ ಮುಖಾಮುಖಿ ಡಿಕ್ಕಿಯಲ್ಲಿ ದಾವೂದ್ ಪಾಷಾ, ಅವರ ಇಬ್ಬರು ಪುತ್ರಿಯರು ಹಾಗೂ ಮತ್ತೊಂದು ಕಾರಿನಲ್ಲಿದ್ದ ವಿವೇಕ್ ಮತ್ತು ಅನಿಲ್ ಮೃತಪಟ್ಟಿದ್ದಾರೆ.
ಅಪಘಾತದ ಸಿಸಿಟಿವಿ ದೃಶ್ಯಾವಳಿ ಆಧರಿಸಿ ಚಾಲಕ ವಿವೇಕ್ ಅವರ ಅಜಾಗರೂಕತೆಯೇ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.