
ಪಶ್ಚಿಮ ಘಟ್ಟಗಳ ರಕ್ಷಣೆ ಹೆಸರಿನಲ್ಲಿ ಕೇಂದ್ರ ಸರ್ಕಾರ 7ನೇ ಬಾರಿಗೆ ಕರಡು ಅಧಿಸೂಚನೆ ಹೊರಡಿಸಿರುವುದನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರವಾಗಿ ವಿರೋಧಿಸಿದ್ದಾರೆ.
ಈ ಹಿಂದೆ 139 ಗ್ರಾಮಗಳಿದ್ದ ಪಟ್ಟಿಯಲ್ಲಿ ಇದೀಗ ತೀರ್ಥಹಳ್ಳಿ ತಾಲ್ಲೂಕಿನ ಗ್ರಾಮಗಳ ಸಂಖ್ಯೆಯನ್ನು 154ಕ್ಕೆ ಏರಿಸಲಾಗಿದ್ದು, ಇದನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ ಎಂದು ಅವರು ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಸಿಎಂ ಡಿ.ಕೆ. ಶಿವಕುಮಾರ್ ಅವರು ವಿಶೇಷ ಅಧಿವೇಶನ ಕರೆಯಲಿದ್ದು, ಮಲೆನಾಡಿನ ಜನರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಹೇಳಿದ್ದಾರೆ.