
ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ಕಾರ್ಯವನ್ನು ಪಾರದರ್ಶಕತೆಯಿಂದ ಪೂರ್ಣಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕದ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ವಿ. ಅವರು ಜುಲೈ 27ರಂದು ಸೂಚನೆ ನೀಡಿದರು.
ಬೆಂಗಳೂರು ಉತ್ತರ ವ್ಯಾಪ್ತಿಗೆ ಸಂಬಂಧಿಸಿದಂತೆ ಅಪರ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಆಯುಕ್ತರು, ಬೆಂಗಳೂರು ಉತ್ತರ ನಗರ ಪಾಲಿಕೆಯ ಪೊಮ್ಮಲ ಸುನೀಲ್ ಕುಮಾರ್ ಅವರ ಉಪಸ್ಥಿತಿಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಯಿತು.
ಯಾವುದೇ ನೈಜ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಪಾರದರ್ಶಕತೆಯಿಂದ ನಿಗದಿತ ಅವಧಿಯಲ್ಲಿ ಗುರಿ ತಲುಪಲು ಕ್ರಮ ಕೈಗೊಳ್ಳಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಕ್ಷೇತ್ರವಾರು ಸಭೆ ನಡೆಸಲು ಮತದಾರರ ನೋಂದಣಾಧಿಕಾರಿಗಳಿಗೆ ಸೂಚಿಸಲಾಗಿದೆ.