
ಬಳ್ಳಾರಿ ಚಲೋ ಪಾದಯಾತ್ರೆಯ ಒತ್ತಡಕ್ಕೆ ಮಣಿದು ರಾಜ್ಯ ಸರ್ಕಾರವು ಬರ ಪರಿಸ್ಥಿತಿ ಚರ್ಚಿಸಲು ವಿಶೇಷ ವಿಧಾನಸಭಾ ಅಧಿವೇಶನ ಕರೆಯಲು ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ ಸುಮಾರು 3,650 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಕಲ್ಯಾಣ ಕರ್ನಾಟಕದಲ್ಲಿಯೇ 937 ಸಾವುಗಳು ಸಂಭವಿಸಿವೆ ಎಂದು ವಿಜಯೇಂದ್ರ ಅಂಕಿ-ಅಂಶ ನೀಡಿದ್ದಾರೆ.
ಬರ ಪೀಡಿತ ಪ್ರದೇಶಗಳ ರೈತರಿಗೆ ತಕ್ಷಣವೇ 5 ಲಕ್ಷ ರೂ.ವರೆಗಿನ ಕೃಷಿ ಸಾಲ ಮನ್ನಾ ಘೋಷಿಸಬೇಕೆಂದು ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದು, ಬೇಡಿಕೆ ಈಡೇರುವವರೆಗೆ ಹೋರಾಟ ಮುಂದುವರಿಸುವುದಾಗಿ ಎಚ್ಚರಿಸಿದೆ.