
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್ಪೇಟೆಯಲ್ಲಿ ಗ್ರಾಹಕರ ಸೋಗಿನಲ್ಲಿ ಬಂದ ಐದಾರು ಜನರ ತಂಡ ಚಿನ್ನದಂಗಡಿ ಮಾಲೀಕ ಪುನ್ನಾರಾಮ್ ಅವರ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿದೆ.
ಬೊಲೆರೋ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಆಭರಣ ದರೋಡೆ ಮಾಡಲು ವಿಫಲರಾಗಿ ಪರಾರಿಯಾಗಿದ್ದು, ಘಟನಾ ಸ್ಥಳದಲ್ಲಿ ಪೊಲೀಸರಿಗೆ 2 ಜೀವಂತ ಗುಂಡುಗಳು ಪತ್ತೆಯಾಗಿವೆ.
ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಜಕ್ಕಸಂದ್ರ ಗ್ರಾಮದಲ್ಲಿ ಆಟೋ ಕಳ್ಳತನದ ಪ್ರಕರಣವೂ ದಾಖಲಾಗಿದ್ದು, ಸಿಸಿ ಕ್ಯಾಮರಾ ದೃಶ್ಯಾವಳಿ ಆಧರಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.