
ಪಶು ವೈದ್ಯಾಧಿಕಾರಿಗಳ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಹೊಯ್ಸಳ ಡ್ರೀಮ್ಸ್ ಅಪಾರ್ಟ್ಮೆಂಟ್ನಲ್ಲಿರುವ ಅವರ ನಿವಾಸದ ಮೇಲೆ ಆಗಸ್ಟ್ 18ರ ಬೆಳಿಗ್ಗೆ 6 ಗಂಟೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದರು.
ಶಿವಶಂಕರಪ್ಪ ಅವರ ಮೊಬೈಲ್ ಅನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಪ್ರಕರಣದ ತನಿಖೆಯ ಭಾಗವಾಗಿ ಅವರ ನಿವಾಸದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.