
ಬೆಂಗಳೂರಿನ ಹಡ್ಸನ್ ವೃತ್ತದಿಂದ ಚಾಲುಕ್ಯ ವೃತ್ತದವರೆಗಿನ ಬೀದಿ ದೀಪಗಳ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಜಿಬಿಎ ಕಾರ್ಯಪಾಲಕ ಅಭಿಯಂತರ ಹೆಚ್. ವಿ. ರಮೇಶ್ ಅವರನ್ನು ಅಮಾನತುಗೊಳಿಸಲಾಗಿದೆ.
ಒಟ್ಟು 222 ಬೀದಿ ದೀಪಗಳ ಪೈಕಿ 140 ದೀಪಗಳು ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವ ಕೃಷ್ಣಭೈರೇಗೌಡರಿಗೆ ಸುಳ್ಳು ವರದಿ ನೀಡಿದ್ದರಿಂದ ಈ ಕ್ರಮ ಕೈಗೊಳ್ಳಲಾಗಿದೆ.
ಆಗಸ್ಟ್ 28ರಂದು ಸಚಿವರು ಖುದ್ದಾಗಿ ಪರಿವೀಕ್ಷಣೆ ನಡೆಸಿದಾಗ 140 ದೀಪಗಳು ಉರಿಯುತ್ತಿಲ್ಲ ಎಂಬುದು ಬೆಳಕಿಗೆ ಬಂದಿದ್ದು, ಕರ್ತವ್ಯಲೋಪಕ್ಕಾಗಿ ಮಂಗಳವಾರ ಅಮಾನತು ಆದೇಶ ಹೊರಡಿಸಲಾಗಿದೆ.