
ನಟಿ ತ್ರಿಷಾ ಕೃಷ್ಣನ್ ಅವರು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿರುವ ನಿಗೂಢ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಕಾರಣವಾಗಿದ್ದು, ಇದು ಇತ್ತೀಚಿನ ವಿವಾದಗಳಿಗೆ ಪರೋಕ್ಷ ತಿರುಗೇಟು ಎಂದು ವ್ಯಾಖ್ಯಾನಿಸಲಾಗುತ್ತಿದೆ.
ತಮ್ಮ ಪೋಸ್ಟ್ನಲ್ಲಿ ಡ್ರಾಮಾ ಮಾಡುವುದನ್ನು ನಿಲ್ಲಿಸಿ ಹಣ ಸಂಪಾದಿಸಿ ಎಂದು ತ್ರಿಷಾ ಸಂದೇಶ ನೀಡಿದ್ದು, ಯಾರ ಹೆಸರನ್ನೂ ನೇರವಾಗಿ ಉಲ್ಲೇಖಿಸಿಲ್ಲ.
ತಮಿಳುನಾಡು ಸಿಎಂ ವಿಜಯ್ ಅವರೊಂದಿಗಿನ ವದಂತಿಗಳು ಮತ್ತು ರಾಜಕೀಯ ನಾಯಕರ ವ್ಯಂಗ್ಯಾತ್ಮಕ ಹೇಳಿಕೆಗಳ ಹಿನ್ನೆಲೆಯಲ್ಲಿ ತ್ರಿಷಾ ಈ ಪೋಸ್ಟ್ ಮಾಡಿದ್ದಾರೆ ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.