
ಕಲ್ಕತ್ತ ಹೈಕೋರ್ಟ್ನ ಆದೇಶವನ್ನು ಉಲ್ಲಂಘಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಟಿಎಂಸಿಪಿ ಸಂಘಟಕರ ವಿರುದ್ಧ ಶನಿವಾರ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ.
ಶುಕ್ರವಾರ ಸೆಂಟ್ರಲ್ ಕೋಲ್ಕತ್ತದ ಕ್ಯಾಥೆಡ್ರಲ್ ರಸ್ತೆಯಲ್ಲಿ ನಡೆದ ಸಭೆಯಲ್ಲಿ 1,500 ಜನರಿಗೆ ಮಾತ್ರ ಅವಕಾಶ ನೀಡಿದ್ದ ನ್ಯಾಯಮೂರ್ತಿ ಸೌಗತ ಭಟ್ಟಾಚಾರ್ಯ ಅವರ ಷರತ್ತುಗಳನ್ನು ಉಲ್ಲಂಘಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲಾಗಿದೆ.
ಟಿಎಂಸಿಪಿ ಬೆಂಬಲಿಗರು ತಡೆಗೋಡೆಗಳನ್ನು ಕಿತ್ತೆಸೆದು ಪೊಲೀಸರೊಂದಿಗೆ ವಾಗ್ವಾದ ನಡೆಸಿದ ಹಿನ್ನೆಲೆಯಲ್ಲಿ, ಸಬ್ ಇನ್ಸ್ಪೆಕ್ಟರ್ ನೀಡಿದ ದೂರಿನ ಮೇರೆಗೆ ಹೇಸ್ಟಿಂಗ್ಸ್ ಪೊಲೀಸ್ ಠಾಣೆಯಲ್ಲಿ ಅಪರಾಧಿಕ ಪಿತೂರಿಯ ಪ್ರಕರಣ ದಾಖಲಾಗಿದೆ.