
ಬೆಂಗಳೂರು-ಮೈಸೂರು ಹೆದ್ದಾರಿಯ ಬಿಡದಿ ಸಮೀಪದ ಅವರಗೆರೆ ಬ್ರಿಡ್ಜ್ ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿಭಜಕದ ತಂತಿ ಬೇಲಿಗೆ ಡಿಕ್ಕಿ ಹೊಡೆದಿದೆ.
ಈ ಭೀಕರ ಅಪಘಾತದಲ್ಲಿ ಕೇರಳದ ವಯನಾಡ್ ಮೂಲದ ಅಫ್ರಿನಾ (20) ಸ್ಥಳದಲ್ಲೇ ಮೃತಪಟ್ಟಿದ್ದು, ಕಾರಿನಲ್ಲಿದ್ದ ಉಳಿದ ನಾಲ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಬೆಂಗಳೂರಿನಿಂದ ಐವರು ಕಾರಿನಲ್ಲಿ ವಯನಾಡ್ಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದ್ದು, ಬಿಡದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.