
ಕೆಪಿಎಸ್ಸಿ ಪಶುವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ತನಿಖೆ ನಡೆಸುತ್ತಿರುವ ಸಿಐಡಿ, ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರನ್ನು ಶನಿವಾರ ವಶಕ್ಕೆ ಪಡೆದುಕೊಂಡಿದೆ.
2016ನೇ ಬ್ಯಾಚ್ನ ಅಧಿಕಾರಿಯಾಗಿರುವ ಜ್ಞಾನೇಂದ್ರ ಕುಮಾರ್, ಫೆಬ್ರವರಿ 2024 ರಿಂದ ಮಾರ್ಚ್ 2026ರವರೆಗೆ ಪರೀಕ್ಷಾ ನಿಯಂತ್ರಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದಾಗ ಈ ಅಕ್ರಮಗಳು ನಡೆದಿವೆ ಎಂದು ಆರೋಪಿಸಲಾಗಿದೆ.
ತನಿಖೆಯ ವೇಳೆ ಗೊಂದಲಮಯ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಅವರನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಹಂತವಾಗಿ ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರುಪಡಿಸಲು ಸಿಐಡಿ ಸಿದ್ಧತೆ ನಡೆಸಿದೆ.