
ಚಿಕ್ಕಬಳ್ಳಾಪುರ ತಾಲೂಕಿನ 71 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ 357 ವಿದ್ಯಾರ್ಥಿಗಳಿಗೆ ಕನ್ನಡ ವರ್ಣಮಾಲೆ ಹಾಗೂ ಗಣಿತದ ಕನಿಷ್ಠ ಜ್ಞಾನ ಇಲ್ಲದಿರುವುದು ಪರೀಕ್ಷೆಯಲ್ಲಿ ಬಯಲಾಗಿದೆ.
ಶಾಸಕ ಪ್ರದೀಪ್ ಈಶ್ವರ್ ಸೂಚನೆ ಮೇರೆಗೆ ಶಿಕ್ಷಣ ಇಲಾಖೆಯು ಸೆಪ್ಟೆಂಬರ್ 8ರಂದು 1208 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಿತ್ತು.
ಕರ್ನಾಟಕ ಕಡ್ಡಾಯ ಶಿಕ್ಷಣ ಕಾಯ್ದೆ ಹಾಗೂ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿದ ಆರೋಪದಡಿ 182 ಜನ ಶಿಕ್ಷಕರಿಗೆ ನೋಟಿಸ್ ಜಾರಿ ಮಾಡಲಾಗಿದೆ.