
ಕರ್ನಾಟಕ ನಾಟಕ ಅಕಾಡೆಮಿಯು 2026-27ನೇ ಸಾಲಿನ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಹಿರಿಯ ನಟ ಡಾ. ಮುಖ್ಯಮಂತ್ರಿ ಚಂದ್ರು ಅವರಿಗೆ ಪ್ರತಿಷ್ಠಿತ 'ಜೀವಮಾನ ಸಾಧನೆ ಗೌರವ ಪ್ರಶಸ್ತಿ' ಘೋಷಿಸಲಾಗಿದೆ.
ರಂಗಭೂಮಿ ಕ್ಷೇತ್ರಕ್ಕೆ ಗಣನೀಯ ಕೊಡುಗೆ ನೀಡಿದ ರಾಜ್ಯದ ವಿವಿಧ ಜಿಲ್ಲೆಗಳ ಒಟ್ಟು 25 ಸಾಧಕ ಕಲಾವಿದರನ್ನು ಈ ಬಾರಿಯ ವಾರ್ಷಿಕ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಅಕಾಡೆಮಿ ತಿಳಿಸಿದೆ.
ದತ್ತಿ ಪ್ರಶಸ್ತಿಗಳ ವಿಭಾಗದಲ್ಲಿ ಬಿ.ಜಿ. ಶ್ರೀಧರ್ ಅವರಿಗೆ ಎಸ್.ವಿ. ವೆಂಕಟಸುಬ್ಬಯ್ಯ ದತ್ತಿ ಪುರಸ್ಕಾರ ಮತ್ತು ಚಂದ್ರಮ್ಮ ಅವರಿಗೆ ಕಲ್ಚರ್ಡ್ ಕಮೆಡಿಯನ್ ಕೆ. ಹಿರಣ್ಣಯ್ಯ ದತ್ತಿ ಪುರಸ್ಕಾರ ಸೇರಿದಂತೆ ಒಟ್ಟು 7 ಸಾಧಕರಿಗೆ ದತ್ತಿ ಗೌರವ ನೀಡಲಾಗಿದೆ.