
ಕನಿಷ್ಠ ವೇತನ ಮತ್ತು ಇಡುಗಂಟು ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಬಿಸಿಯೂಟ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ.
ದಕ್ಷಿಣ ಭಾರತದ ಇತರ ರಾಜ್ಯಗಳಲ್ಲಿ ನೀಡುತ್ತಿರುವ ವೇತನ ಮತ್ತು ಸೌಲಭ್ಯಗಳ ಕುರಿತು ವರದಿ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸ್ಥಳದಲ್ಲೇ ಸೂಚನೆ ನೀಡಿದ್ದಾರೆ.
ನೌಕರರ ಮನವಿಯ ಮೇರೆಗೆ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಬಿಸಿಯೂಟದ ಮಹಿಳಾ ನೌಕರರಿಗೆ ನೀಡುವ ಸಾಧ್ಯತೆ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸುವುದಾಗಿ ಸಚಿವರು ತಿಳಿಸಿದ್ದಾರೆ.