
ಬಿಹಾರದ ಲಖಿಸರೈ ಅಶೋಕ ಧಾಮ ದೇವಾಲಯದಲ್ಲಿ ಶ್ರಾವಣ ಮಾಸದ ಮೂರನೇ ಸೋಮವಾರದಂದು ಸಂಭವಿಸಿದ ಕಾಲ್ತುಳಿತದಲ್ಲಿ ಏಳು ಭಕ್ತರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಪಶ್ಚಿಮ ಬಂಗಾಳದ ತಾರಾಪೀಠದಲ್ಲಿರುವ ಹೋಟೆಲ್ನಲ್ಲಿ ಸೋಮವಾರ ಬೆಳಿಗ್ಗೆ 5 ಗಂಟೆ ಸುಮಾರಿಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಏಳು ಮಂದಿ ಮೃತಪಟ್ಟಿದ್ದಾರೆ.
ಬಿಹಾರದಲ್ಲಿ 50,000ಕ್ಕೂ ಹೆಚ್ಚು ಭಕ್ತರು ಸೇರಿದ್ದಾಗ ಬ್ಯಾರಿಕೇಡ್ ಮುರಿದು ಈ ದುರಂತ ಸಂಭವಿಸಿದ್ದರೆ, ಪಶ್ಚಿಮ ಬಂಗಾಳದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.