
ಭಾರತರತ್ನ ಎಂ.ಎಸ್. ಸುಬ್ಬುಲಕ್ಷ್ಮಿ ಅವರ ಬಯೋಪಿಕ್ ಚೆನ್ನೈನ ಮ್ಯೂಸಿಕ್ ಅಕಾಡೆಮಿಯಲ್ಲಿ ಅದ್ದೂರಿಯಾಗಿ ಚಾಲನೆ ಪಡೆದುಕೊಂಡಿದ್ದು, ಉಲಗನಾಯಗನ್ ಕಮಲ್ ಹಾಸನ್ ಮುಹೂರ್ತ ನೆರವೇರಿಸಿದ್ದಾರೆ.
ಅಲ್ಲು ಅರವಿಂದ್, ರಾಕ್ಲೈನ್ ವೆಂಕಟೇಶ್ ಹಾಗೂ ಬನ್ನಿ ವಾಸು ಜಂಟಿಯಾಗಿ ನಿರ್ಮಿಸುತ್ತಿರುವ ಈ ಪ್ಯಾನ್ ಇಂಡಿಯಾ ಚಿತ್ರಕ್ಕೆ ಗೌತಮ್ ತಿನ್ನನುರಿ ನಿರ್ದೇಶನ ಹಾಗೂ ಅನಿರುದ್ಧ್ ರವಿಚಂದರ್ ಸಂಗೀತವಿದೆ.
ಎಂ.ಎಸ್. ಅಮ್ಮನವರ 110ನೇ ಜನ್ಮದಿನದಂದು ಆರಂಭವಾಗಿರುವ ಈ ಚಿತ್ರದಲ್ಲಿ ನಟಿಸಲು ನೂರು ಶ್ರಮ ಹಾಕುವುದಾಗಿ ನಟಿ ರಶ್ಮಿಕಾ ಮಂದಣ್ಣ ಭರವಸೆ ನೀಡಿದ್ದಾರೆ.