
ಕರ್ನಾಟಕದಲ್ಲಿ ಸುಮಾರು ಮೂರು ತಿಂಗಳ ಅವಧಿಯಲ್ಲಿ 72,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಅವರು ಬೆಂಗಳೂರಿನ ಈಸ್ಟ್ ಪಾಯಿಂಟ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಪದವಿ ಪ್ರದಾನ ಸಮಾರಂಭದಲ್ಲಿ ತಿಳಿಸಿದರು.
ಬೆಂಗಳೂರು, ತುಮಕೂರು, ಮೈಸೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ನಗರಗಳಲ್ಲಿ ಸೆಮಿಕಂಡಕ್ಟರ್ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ಘಟಕಗಳನ್ನು ಸ್ಥಾಪಿಸಲು ವಿಶ್ವದ ಹಲವು ಕಂಪನಿಗಳು ಸರ್ಕಾರವನ್ನು ಸಂಪರ್ಕಿಸುತ್ತಿವೆ.
ಭಾರತದಲ್ಲಿ ಸುಮಾರು 6,000 ಎಂಜಿನಿಯರಿಂಗ್ ಕಾಲೇಜುಗಳಿದ್ದು, ಪ್ರತಿವರ್ಷ ಸುಮಾರು 15 ಲಕ್ಷ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಾರೆ ಮತ್ತು ಸುಮಾರು 10 ಲಕ್ಷ ಎಂಜಿನಿಯರಿಂಗ್ ಪದವೀಧರರಾಗಿ ಹೊರಹೊಮ್ಮುತ್ತಿದ್ದಾರೆ ಎಂದು ಪರಮೇಶ್ವರ್ ಹೆಮ್ಮೆ ವ್ಯಕ್ತಪಡಿಸಿದರು.