
ಬೀದರ್ ಜಿಲ್ಲೆಯ ಹುಮನಾಬಾದ್ ಕೈಗಾರಿಕಾ ಪ್ರದೇಶದಲ್ಲಿ ಮಾಂಜ್ರಾ ನದಿಗೆ ರಾಸಾಯನಿಕ ತ್ಯಾಜ್ಯ ಹರಿಸುತ್ತಿದ್ದ ಮೂರು ಕಾರ್ಖಾನೆಗಳನ್ನು ತಕ್ಷಣದಿಂದಲೇ ಮುಚ್ಚಲು ಸಚಿವ ಈಶ್ವರ್ ಖಂಡ್ರೆ ಜಿಲ್ಲಾಧಿಕಾರಿಗೆ ಆದೇಶಿಸಿದ್ದಾರೆ.
ಮೆ.6H ಇಂಡಸ್ಟ್ರೀಸ್, ಮೆ.ಸತ್ಯದೀಪ್ತ ಕೆ. ಇಂಡಸ್ಟ್ರೀ ಮತ್ತು ಮೆ.ಹಿಮಾಲಯ ಕೈಗಾರಿಕೆಗಳಿಗೆ ಕ್ಲೋಷರ್ ಆರ್ಡರ್ ನೀಡಲಾಗಿದ್ದು, 24 ಗಂಟೆಯೊಳಗೆ ಅನುಸರಣಾ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ.
ಈ ಕಾರ್ಖಾನೆಗಳು ಪ್ರತಿದಿನ ಸಾವಿರಾರು ಲೀಟರ್ ರಾಸಾಯನಿಕ ತ್ಯಾಜ್ಯವನ್ನು ಗುರುಗಂಗಾ ಹಳ್ಳಕ್ಕೆ ಬಿಡುತ್ತಿದ್ದು, ಇದರಿಂದ ಜಲಚರಗಳು ಮತ್ತು ಪ್ರಾಣಿಗಳು ಸಾವನ್ನಪ್ಪುತ್ತಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.